ಭಾನುಮತಿಯ ಮುತ್ತುಗಳು

Category: , , , ,

150.00

2 In Stock
Number of pages

118

Year of Publication

2022

Author

ಸಮುದ್ಯತಾ ವೆಂಕಟರಾಮು

eBook

https://play.google.com/store/books/details/Samudyatha_Venkataramu_Bhaanumatiya_Muttugalu?id=FwS6EAAAQBAJ

2 in stock

Description

ಇಲ್ಲಿನ ಕವಿತೆಗಳು ಉದಯೋನ್ಮುಖ ಕವಿಯೊಬ್ಬಳ ತೊದಲು ನುಡಿಗಳಲ್ಲ. ಕಾವ್ಯ-ಸಂಗೀತಗಳ ಸತತ ಅಭ್ಯಾಸ ಮತ್ತು ಪ್ರಯೋಗಗಳಿಂದ ಸಂಸ್ಕಾರ ಪಡೆದ ಹಾಗೂ ತುಂಬು ಸಂಸಾರ ನಡೆಸುತ್ತಿರುವ ಗೃಹಿಣಿಯೊಬ್ಬಳ ಗಾಢವಾದ ಜೀವನಾನುಭವಗಳಿಂದ ಮಾಗಿದ ಮನಸ್ಸಿನ ಉಕ್ತಿಗಳು. ಸಮುದ್ಯತಾ ಅವರಿಗೆ ಕಾವ್ಯವೆಂದರೇನು ಎಂಬುದು ಗೊತ್ತಿದೆ. ಹಾಗೆಯೇ ಯಾವುದು ಕಾವ್ಯವಾಗಲಾರದು ಎಂಬ ಎಚ್ಚರವೂ ಇದೆ…

ಎಲ್ಲವನ್ನೂ ತೂಗಿಸಿಕೊಂಡು, ಸಮತೋಲನಗೊಳಿಸಿಕೊಂಡು ಕಾವ್ಯ ಕಟ್ಟುವುದು ಮತ್ತು ಬದುಕನ್ನು ಕಟ್ಟಿಕೊಳ್ಳುವುದು ಸಮುದ್ಯತಾ ಅವರ ಪ್ರಧಾನ ಹಂಬಲವೆಂದು ತೋರುತ್ತದೆ. ಕಾವ್ಯದಲ್ಲಿ ಭಾವ-ಭಾಷೆಗಳು, ಭಾವುಕತೆ-ಬೌದ್ಧಿಕತೆಗಳು ಜೊತೆಗೂಡಬೇಕು. ಅಭಿವ್ಯಕ್ತಿಯ ಸಫಲತೆಗೆ ಓದುಗನ ಸಹಭಾಗಿತ್ವವೂ ಬೇಕು. ಸಂಸಾರ ಮಧುರವಾಗಿರಲು ಸಂಗಾತಿಗಳ ನಡುವೆ ಹೊಂದಾಣಿಕೆ ಇರಬೇಕು. ಇದೊಂದು ಯಾಂತ್ರಿಕ ಸಮೀಕರಣವಲ್ಲ ಎಂಬುದು ಕವಿಗೆ ಚೆನ್ನಾಗಿ ಗೊತ್ತಿದೆ. ಒಟ್ಟಾಗಿ ಹೆಜ್ಜೆ ಹಾಕುವ ಅಗತ್ಯ-ಅನಿವಾರ್ಯತೆ ಮತ್ತು ಅದರ ಕಷ್ಟಗಳನ್ನು ಒಟ್ಟಿಗೇ ಗಮನಿಸುವ ವ್ಯವಧಾನ ಅವರಿಗಿದೆ. ಹೀಗಾಗಿ ಸಮುದ್ಯತಾ ಅವರ ಕವಿತೆಗಳು ಕೇವಲ ಭಾವದಲ್ಲಿ ಸ್ರವಿಸುವುದಿಲ್ಲ. ಅವುಗಳಲ್ಲಿ ಚಿಂತನೆಯ, ಧ್ಯಾನದ ಆಯಾಮಗಳೂ ಒಂದು ಹದದಲ್ಲಿ ಕರಗಿಕೊಂಡಿವೆ…

ಮುಖ್ಯವಾದ ಮಾತೆಂದರೆ ಸಮುದ್ಯತಾ ಅವರ ಕವಿತೆಗಳು ಈಗಾಗಲೇ ಖಚಿತವಾಗಿರುವ ಸತ್ಯಗಳ ಏಕಮುಖ ಮಂಡನೆಗಳಲ್ಲ. ಕಾವ್ಯಸ್ವರೂಪವನ್ನೂ, ಜೀವನದ ಸ್ವರೂಪವನ್ನೂ ಅನುಭವದಲ್ಲಿ, ಪ್ರಯೋಗದಲ್ಲಿ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನಗಳು. ಅವರ ಕಾವ್ಯದ ಸಫಲತೆ-ಅಸಫಲತೆಗಳಿಗಿಂತ ನಮಗೆ ತಟ್ಟುವುದು ಅದರ ಹಿಂದಿನ ಆರ್ತತೆ ಮತ್ತು ವಿಸ್ಮಯ.

– ಟಿ.ಪಿ. ಅಶೋಕ (ಮುನ್ನುಡಿಯಲ್ಲಿ)

Reviews

There are no reviews yet.

Be the first to review “ಭಾನುಮತಿಯ ಮುತ್ತುಗಳು”

Your email address will not be published. Required fields are marked *

Samudyata Venkataramu

ಸಾಗರದ ಸಮೀಪದ ಶೆಡ್ತೀಕೆರೆ ಎಂಬ ಹಳ್ಳಿಯಲ್ಲಿ ವಾಸವಾಗಿರುವ ಸಮುದ್ಯತಾ ವೆಂಕಟರಾಮು ಅವರು ಕೃಷಿ ಕುಟುಂಬದ ಗೃಹಿಣಿ. ಬಿ.ಎ. ಪದವಿ ಪಡೆದಿರುವ ಇವರು ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಆಸಕ್ತರು, ಹವ್ಯಾಸವಾಗಿ ಗಮಕವಾಚನ ಕಲೆಯನ್ನು ಅಭ್ಯಾಸ ಮಾಡಿದ್ದಾರೆ. ರಾಜ್ಯಾದ್ಯಂತ ಹಲವಾರು ಗಮಕ ಕಾರ್ಯಕ್ರಮಗಳನ್ನು ನೀಡಿದ ಅನುಭವ ಇವರಿಗಿದೆ. `Forever Forty ಕರ್ನಲ್ ವಸಂತ್’ (ಸುಭಾಷಿಣಿ ವಸಂತ್ ಮತ್ತು ವೀಣಾ ಪ್ರಸಾದ್) ಎಂಬ ಇಂಗ್ಲಿಷ್ ಪುಸ್ತಕದ ಭಾವಾನುವಾದವನ್ನು ಇವರು ಮಾಡಿದ್ದು ಅದು ಪ್ರಕಟಗೊಂಡಿದೆ. ಹವ್ಯಕ ಭಾಷೆಯಲ್ಲಿನ ಸಣ್ಣ ಕಥೆಗಳಿಗೆ ದೊರಕುವ ಕೊಡಗಿನ ಗೌರಮ್ಮ ಕಥಾ ಪ್ರಶಸ್ತಿ ಹಾಗೂ ಮುಂಬಯಿ ಯ.ಜಿ.ಡಿ. ಜೋಶಿ ಪ್ರತಿಷ್ಠಾನ ನಡೆಸಿದ ಲಲಿತ ಪ್ರಬಂಧ ಮತ್ತು ಕಥಾ ಸ್ಪರ್ಧೆಯಲ್ಲಿ ಬಹುಮಾನಗಳು ಇವರಿಗೆ ದೊರಕಿವೆ. ನೀನಾಸಂ ರಂಗ ಶಿಕ್ಷಣ ಕೇಂದ್ರದಲ್ಲಿ ವರ್ಷಕ್ಕೊಮ್ಮೆ ಹತ್ತು ದಿನಗಳ ಕಾಲ ಪಠ್ಯವಾಗಿ ವಿದ್ಯಾರ್ಥಿಗಳಿಗೆ ಗಮಕ ವಾಚನದ ಕ್ರಮವನ್ನು ಕಲಿಸುವ ಕೆಲಸವನ್ನೂ ಇವರು ಮಾಡಿದ್ದಾರೆ.

More By The Author