ಲೋಕೋತ್ತಮೆ ಮತ್ತು ಕಾಲಯಾತ್ರೆ

Category: , , , ,

125.00

1 In Stock
Weight 130 g
Number of pages

82

Year of Publication

2022

Author

ಚನ್ನಕೇಶವ, ವಿಶಾಲಾ ವಾರಣಾಶಿ, ಮೀರಾ ಚಕ್ರವರ್ತಿ

Publisher

ಥಿಯೇಟರ್ ತತ್ಕಾಲ್ ಬುಕ್ಸ್

1 in stock

Description

ಲೋಕೋತ್ತಮೆ: ಚನ್ನಕೇಶವ ಮತ್ತು ಲೇಖಕರಾದ ಡಾ. ವಿಶಾಲಾ ವಾರಣಾಶಿ ಅವರು ಭಾವಾನುವಾದ ಮಾಡಿದ, ಸುಮಾರು ಕ್ರಿ.ಪೂ 411ರಲ್ಲಿ ಗ್ರೀಕ್ ನಾಟಕಕಾರ ಅರಿಸ್ಟೋಫಿನಿಸ್‌ನಿಂದ ರಚಿತವಾದ ನಾಟಕವಿದು. ಸ್ಪಾರ್ಟಾ ಹಾಗೂ ಅಥೆನ್ಸ್ ನಗರಗಳ ನಡುವೆ ನಿಯಮಿತವಾಗಿ ನಡೆಯುತ್ತಿದ್ದ ಯುದ್ಧಗಳಿಂದ ಕಂಗೆಟ್ಟಿದ್ದ ಆ ಎರಡೂ ನಗರಗಳ ಹೆಣ್ಣು ಮಕ್ಕಳು ಲೈಸಿಸ್ಟ್ರಾಟ ಎಂಬ ಹೆಣ್ಣುಮಗಳ ನೇತೃತ್ವದಲ್ಲಿ ಒಂದು ಕ್ರಾಂತಿಕಾರಕ ನಿರ್ಧಾರಕ್ಕೆ ಬರುತ್ತಾರೆ. ಯುದ್ಧ ನಿಲ್ಲಿಸಿ ಎರಡೂ ನಗರಗಳು ಶಾಂತಿಯ ಒಪ್ಪಂದಕ್ಕೆ ಬರುವವರೆಗೂ ತಾವುಗಳು ಯಾರೂ ತಮ್ಮ ತಮ್ಮ ಗಂಡಂದಿರೊಂದಿಗೆ ಹಾಸಿಗೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ತೀರ್ಮಾನಿಸಿ ಊರಿನ ಹಣಕಾಸಿನ ಸೌಧವನ್ನು ವಶಪಡಿಸಿಕೊಂಡು ಎಲ್ಲ ಹೆಂಗಸರೂ ಅಲ್ಲಿ ಸೇರಿಕೊಂಡು ಪ್ರತಿಭಟಿಸತೊಡಗುತ್ತಾರೆ. ಹೆಂಗಸರ ಈ ವಿಚಿತ್ರ ಪ್ರತಿಭಟನೆಗೆ ಕಡೆಗೆ ವಿಧಿಯಿಲ್ಲದೆ ಗಂಡಸರೆಲ್ಲ ಬಗ್ಗಿ ಶಾಂತಿ ಒಪ್ಪಂದಕ್ಕೆ ಬಂದು ಯುದ್ಧದಿಂದ ವಿಮುಖರಾಗುತ್ತಾರೆ. ಇದೂ ಸಹ ಮೇಲಿನ ನಾಟಕದಂತೆ ರೂಪಕದ ಮಾದರಿಯಲ್ಲಿದ್ದು ನಟರ ತಂಡ, ಸಂಗೀತದ ಮೇಳ ಇವನ್ನೆಲ್ಲ ಯಶಸ್ವಿಯಾಗಿ ಬಳಸಿಕೊಂಡು ಮಾಡಬಹುದಾದ ನಾಟಕವಾಗಿದೆ. ಅಲ್ಲದೆ ನೀನಾಸಮ್ ತಿರುಗಾಟಕ್ಕೆ ಚನ್ನಕೇಶವ ಅವರು ಯಶಸ್ವಿಯಾಗಿ ಈ ನಾಟಕವನ್ನು ನಿರ್ದೇಶನ ಮಾಡಿದ್ದರು ಕೂಡ.

ಕಾಲಯಾತ್ರೆ: ರವೀಂದ್ರನಾಥ ಟ್ಯಾಗೋರರ ಅಷ್ಟೇನೂ ಪ್ರಸಿದ್ಧವಲ್ಲದ ಸಣ್ಣ ರೂಪಕದಂತಹ ನಾಟಕ ಇದು. ಇದನ್ನು ನೇರ ಬಂಗಾಳಿಯಿಂದ ಮೀರಾ ಚಕ್ರವರ್ತಿಯವರ ಸಹಾಯದಿಂದ ಕನ್ನಡಕ್ಕೆ ತಂದಿದ್ದಾರೆ ಚನ್ನಕೇಶವ ಅವರು. ಅದೆಷ್ಟು ಚೆನ್ನಾಗಿ ಇದನ್ನು ಕನ್ನಡಕ್ಕೆ ತಂದಿದ್ದಾರೆ ಎಂದರೆ ಎಂದರೆ ಓದುತ್ತಿದ್ದರೆ ಖುಷಿಯಾಗುತ್ತದೆ. ಅನಾದಿಕಾಲದಿಂದಲೂ ಇರುವ ಮಹಾಕಾಲದ ರಥವು ಇಂದು ಯಾರು ಬಂದು ಎಷ್ಟೇ ಬೊಬ್ಬೆ ಹೊಡೆದರೂ ಒಂದಿಂಚೂ ಅಲುಗದೆ ನಿಂತುಬಿಟ್ಟಿದೆ! ಹಿಂದೆಲ್ಲ ರಾಜ ಮಹಾರಾಜರು ಬಂದು ಪೂಜೆ ಮಾಡಿ ಕೈ ಹಚ್ಚುತ್ತಿದ್ದಂತೆ ಚಲಿಸುತ್ತಿತ್ತು, ನಂತರ ರಾಜ ಪುರೋಹಿತರುಗಳು ಬಂದು ಕೈಮುಗಿದು ಕೈ ಹಚ್ಚಿದಾಗ ಚಲಿಸುತ್ತಿತ್ತು, ತದನಂತರ ಪಟ್ಟಣಶೆಟ್ಟಿಗಳು ಬಂದಾಗ ಚಲಿಸುತ್ತಿತ್ತು. ಆದರೆ ಇಂದು ಇವ್ಯಾರಿಗೂ ಅದು ಕಮಕ್‍ಕಿಮಕ್ಕೆನ್ನದೆ ತನ್ನ ಇಂದಿನ ಚಾಲಕರಾದ ಶೂದ್ರರ ದಾರಿ ಕಾಯುತ್ತ ಕುಳಿತಿದೆ ಈ ಮಹಾಕಾಲನ ರಥ! ಕುವೆಂಪುರವರ ಬಹಳ ಪ್ರಸಿದ್ಧ ನಾಟಕ ಶೂದ್ರತಪಸ್ವಿಯನ್ನು ನೆನಪಿಸುವಂತಿದೆ ಈ ನಾಟಕ. ಮತ್ತೊಮ್ಮೆ ಸಂಗೀತ, ಮೇಳ, ಹಾಗೂ ರಂಗಸಜ್ಜಿಕೆಯನ್ನು ಯಶಸ್ವಿಯಾಗಿ ರಂಗದ ಮೇಲೆ ಕಾಣಬಹುದಾದ ನಾಟಕವಿದು.

Reviews

There are no reviews yet.

Be the first to review “ಲೋಕೋತ್ತಮೆ ಮತ್ತು ಕಾಲಯಾತ್ರೆ”

Your email address will not be published. Required fields are marked *

Channakeshava

ಚನ್ನಕೇಶವ ಜಿ. ಅವರು ಚಿತ್ರಕಲೆ ಮತ್ತು ರಂಗಭೂಮಿಯ ಪದವೀಧರ. ರಂಗಭೂಮಿಯ ವಿವಿಧ ಕ್ಷೇತ್ರಗಳಲ್ಲಿ ಸ್ವತಃ ತಮ್ಮನ್ನು ತೊಡಗಿಸಿಕೊಂಡು, ಅಭಿನಯ, ನಿರ್ದೇಶನ, ನಾಟಕ ರಚನೆಯ ಜೊತೆಗೆ ಹವ್ಯಾಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಂಗ-ಕಾರ್ಯಾಗಾರಗಳನ್ನು ನಡೆಸಿಕೊಟ್ಟಿದ್ದರು. ೨೦೦೩ರಲ್ಲಿ ಅಮೇರಿಕಾದ `ಬ್ರೆಡ್ ಅಂಡ್ ಪಪೆಟ್' ಸಂಸ್ಥೆಯ ಎರಡು ತಿಂಗಳ ಕಾರ್ಯಾಗಾರಕ್ಕೆ ಭಾರತದಿಂದ ವಿಶೇಷ ಆಹ್ವಾನಿತರಾಗಿದ್ದರು. ೨೦೦೯ರಲ್ಲಿ ಬ್ರಿಟಿಷ್ ಕೌನ್ಸಿಲ್ ಏರ್ಪಡಿಸಿದ್ದ ಸ್ಕಾಟ್‌ಲ್ಯಾಂಡ್‌ನ ಎಡಿನ್‌ಬರೋದಲ್ಲಿ ನಡೆದ `ಥಿಯೇಟರ್ ಸೂತ್ರ' ರಂಗ ಸಮ್ಮೇಳನಕ್ಕೆ ಭಾರತದ ಒಬ್ಬ ರಾಯಭಾರಿಯಾಗಿದ್ದರು. ೨೦೧೬ರಲ್ಲಿ ಅಮೇರಿಕಾದ ದಕ್ಷಿಣ ಕರೋಲಿನಾದ ವಿಶ್ವವಿದ್ಯಾಲಯದಲ್ಲಿ ನಡೆದ ಜಗತ್ತಿನಾದ್ಯಂತ ಚದುರಿರುವ ಆಫ್ರಿಕಾ ಜನಾಂಗದವರ `ಮಹಿಳಾ ಕಲಾ ಸಮ್ಮೇಳನ'ಕ್ಕೆ ಸಿದ್ದಿ ಜನಾಂಗದ ಪ್ರತಿನಿಧಿಯಾಗಿ, ಸಿದ್ದಿ ಕಲಾವಿದೆಯರೊಡನೆ ವಿಶೇಷ ಆಹ್ವಾನಿತರಾಗಿದ್ದರು. ದೇಶಕಾಲ ಸಾಹಿತ್ಯ ಪತ್ರಿಕೆಯ ವಿನ್ಯಾಸಕರಾಗಿದ್ದ ಇವರು ೩೦೦ಕ್ಕೂ ಹೆಚ್ಚು ಪುಸ್ತಕ ವಿನ್ಯಾಸ ಮಾಡಿದ್ದಾರೆ. ಮಂಚೀಕೇರಿಯ `ಸಿದ್ದಿ ಟ್ರಸ್ಟ್' ಮತ್ತು ಬೆಂಗಳೂರಿನ `ಲೋಕಚರಿತ ಟ್ರಸ್ಟ್' ಇವುಗಳ ಸ್ಥಾಪಕ ಸದಸ್ಯರಾದ ಇವರು ಸಿದ್ದಿ ಸಮುದಾಯದೊಟ್ಟಿಗೆ ಮತ್ತು ಬೆಂಗಳೂರಿನಲ್ಲಿ ಯುವ ಕಲಾಸಕ್ತ ವಿದ್ಯಾರ್ಥಿಗಳೊಡನೆ ಕಲಾ ಸಂಸ್ಕೃತಿಯನ್ನು ಕಟ್ಟುವ ಕೆಲಸದಲ್ಲಿ ನಿರತರಾಗಿದ್ದರು.

More By The Author